Govinda Karajola: ಬಿಜೆಪಿಯಿಂದ ಮಾಜಿ ಸಚಿವರಾದ ಗೋವಿಂದ ಕಾರಜೋಳಗೆ ಟಿಕೆಟ್.Govinda Karajola: ಬಿಜೆಪಿಯಿಂದ ಮಾಜಿ ಸಚಿವರಾದ ಗೋವಿಂದ ಕಾರಜೋಳಗೆ ಟಿಕೆಟ್.
Spread The Love

ಚಿತ್ರದುರ್ಗ: Govinda Karajola ಬಿಜೆಪಿಯಿಂದ ಮಾಜಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಮಾಜಿ ಸಚಿವ ಗೋವಿಂದ ಕಾರಜೋಳ (Govinda Karajola) ಅವರಿಗೆ ಟಿಕೆಟ್ ನೀಡಿದೆ. ಹೌದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರ ಬದಲಿಗೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಕೇಂದ್ರದ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ನಾರಾಯಣಸ್ವಾಮಿ ಅವರಿಗೆ ಹಾಲಿ ಸರ್ಕಾರದ ಮೇಲಿನ ಅಸಮಾಧಾನದ ಅಲೆಯಿಂದಾಗಿ ಟಿಕೆಟ್ ನಿರಾಕರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಚಿತ್ರದುರ್ಗದವರಲ್ಲದ ನಾರಾಯಣಸ್ವಾಮಿ ಈ ಹಿಂದೆ ಬೆಂಗಳೂರು ಸಮೀಪದ ಆನೇಕಲ್‌ನಿಂದ ಶಾಸಕರಾಗಿದ್ದರು.

28 ಕ್ಷೇತ್ರಗಳ ಪೈಕಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ. ಉಳಿದ ಮೂರು ಸ್ಥಾನಗಳಾದ ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಎನ್‌ಡಿಎ ಮೈತ್ರಿಕೂಟ ಪಕ್ಷ ಜೆಡಿಎಸ್ ಸ್ಪರ್ಧಿಸಲಿದೆ.

By navakarnatakatimes

NKT (Navakarnataka Times) News Kannada is a news and media company based in Vijayapura, Belgaum Karnataka. Its registration with the Government of India

One thought on “Govinda Karajola: ಬಿಜೆಪಿಯಿಂದ ಮಾಜಿ ಸಚಿವರಾದ ಗೋವಿಂದ ಕಾರಜೋಳಗೆ ಟಿಕೆಟ್.”
  1. […] ಸಭೆ|  ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ. Govinda Karajola: ಬಿಜೆಪಿಯಿಂದ ಮಾಜಿ ಸಚಿವರಾದ ಗೋವಿಂ… Sumalatha Ambareesh: ಜೊತೆ ಮಾತುಕತೆಗೆ ನಾವು ಸಿದ್ಧ […]

Leave a Reply

Your email address will not be published. Required fields are marked *